ಸತ್ಯಕಾಮ ವಾರ್ತೆ ಯಾದಗಿರಿ:
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಎಸ್. ಮಧು ಬಂಗಾರಪ್ಪ ಅವರು ಬುಧವಾರ ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11-30 ಗಂಟೆಗೆ ಯಾದಗಿರಿ ತಾಲೂಕಿನ ಅರಕೇರಾ .ಕೆ ಗ್ರಾಮ ದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಇವರ ಸಹಭಾಗಿತ್ವದಲ್ಲಿ 2024-25 ನೇ ಸಾಲಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿ ಗಳಿಗೆ ವಾರದಲ್ಲಿ 6 ದಿನಗಳ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವರು.
ಅಂದು ಮಧ್ಯಾಹ್ನ 2-30ಗಂಟೆಗೆ ಯಾದಗಿರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರ್ಗಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಂಜೆ 6-30 ಗಂಟೆಗೆ ಕಲಬುರ್ಗಿ ಗೆ ಪ್ರಯಾಣ ಬೆಳೆಸುವರು.

