ಸತ್ಯಕಾಮ ವಾರ್ತೆ ಕಲಬುರ್ಗಿ:
ಕರ್ನಾಟಕ ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಹೊರಬಂದಿದ್ದೂ, ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ರಾಧಕೃಷ್ಣ ದೊಡ್ಮನಿ ಬಾರಿ ಅಂತರದಲ್ಲಿ ಗೆಲುವಿನ ಪಟಾಕಿ ಸಿಡಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ವರದಿ ಮಾಡಿವೆ.
2019ರ ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ ಸರದಾರ ಎಂದು ಗುರುತಿಸಿಕೊಂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಸೋಲಿಸಿ ಬಿಜೆಪಿಯ ಬಾವುಟವನ್ನು ಹಾರಿಸಿದ್ದ ಉಮೇಶ್ ಜಾಧವ್ ಅವರು ಈ ಬಾರಿಯೂ ಗೆಲುವು ಸಾಧಿಸಿ ಕಲಬುರ್ಗಿ ಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸದಿಂದ ಮತ್ತೆ ಹೈಕಮಾಂಡ್ ಉಮೇಶ್ ಜಾಧವ್ ಅವರನ್ನು ಕಣಕ್ಕೆ ಇಳಿಸಿದೆ.
ಆದರೆ ಇದೆಲದ್ದಕ್ಕೂ ತೆರೆ ಎಳೆದಿರುವ ಚುನಾವಣೋತ್ತರ ಸಮೀಕ್ಷೆಗಳು ಖರ್ಗೆ ಅಳಿಯ ರಾಧಕೃಷ್ಣ ದೊಡ್ಮನಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿರುಧ್ಧ ಬಾರಿ ಅಂತರದಿಂದ ಗೆಲುವು ಸಾಧಿಸಲಿದ್ದೂ ಕಳೆದ ಬಾರಿ ಬಿಜೆಪಿಗೆ ಮತ ಚಲಾಯಿಸಿದ್ದ ಮತದಾರರು ಈ ಬಾರಿ ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳನ್ನು ಮೆಚ್ಚಿ ಈ ಬಾರಿ ರಾಧಾಕೃಷ್ಣ ದೊಡ್ಡಮನಿ ಅವರ ಕೈ ಹಿಡಿದಿರುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಸಮೀಕ್ಷೆಗಳ ಬಹಿರಂಗಗೊಳಿಸಿವೆ.
- Advertisement -
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾಗಿರುವ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಮೇ 07 ರಂದು ಎರಡನೇ ಹಂತದ ಚುನಾವಣೆ ನಡೆದಿತ್ತು. ಬಿಜೆಪಿ ಅಭ್ಯರ್ಥಿಯಾಗಿ ಉಮೇಶ್ ಜಾಧವ್ ಕಾಂಗ್ರೆಸ್ಸ್ ಅಭ್ಯರ್ಥಿಯಾಗಿ ಖರ್ಗೆ ಅಳಿಯ ರಾಧಕೃಷ್ಣ ದೊಡ್ಮನಿ ಸ್ಪರ್ಧಿಸಿದ್ದರು.
ಈ ಬಾರಿ ನಾನೇ ಗೆಲ್ಲುವೇ ಎಂದು ಪಣತೊಟ್ಟಿರುವ ಇಬ್ಬರೂ ಅಭ್ಯರ್ಥಿಗಳು ಜೂನ್ 04 ರ ಫಲಿತಾಂಶಕ್ಕೆ ಕಾಯಬೇಕಿದೆ.

