ವಡಗೇರಾ:68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಲವು ಸಂಘಟನೆ ಹಾಗೂ ಖಾಸಗಿ ಶಾಲೆಗಳ ವತಿಯಿಂದ ವಡಗೇರಾ ಪಟ್ಟಣ್ಣದಲ್ಲಿ ಮೆರವಣಿಗೆ ನಡೆಸಲಾಯಿತು, ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷದಿಂದಾಗಿ ಕೂದಲೆಳೆ ಅಂತರದಲ್ಲಿ ಶಾಲೆ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ನಡೆಯಲಿದ್ದ ಘೋರ ದುರಂತವೊಂದು ತಪ್ಪಿದಂತಾಗಿದೆ.
ಪಟ್ಟಣ್ಣದಲ್ಲಿ ಮೆರವಣಿಗೆ ಮುಗಿಸಿಕೊಂಡು ಕಾರ್ಯಕ್ರಮದತ್ತ ತೆರಳುತ್ತಿದ್ದ ವೇಳೆ ಪಟ್ಟಣ್ಣದ ವಾಲ್ಮೀಕಿ ವೃತ್ತದ ಬಳಿ ಇದ್ದ ವಿದ್ಯುತ್ ಕಂಬದ ವಿದ್ಯುತ್ ತಂತಿ ಹರಿದು ಟ್ರ್ಯಾಕ್ಟರ್ ಟ್ರಾಲಿಯಲ್ಲಿದ ಭುವನೇಶ್ವರಿ ತಾಯಿ ಭಾವಚಿತ್ರದ ಕಟ್ಟಿಗೆಯ ಮೇಲೆ ಬಿದ್ದಿದ್ದೆ, ಈ ವೇಳೆ ಟ್ರ್ಯಾಕ್ಟರ್ ನಲ್ಲಿದ್ದ ನಾಲ್ಕೈದು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದು, ತಕ್ಷಣ ಸ್ಥಳೀಯರು ವಿದ್ಯಾರ್ಥಿಗಳನ್ನು ಕೆಳಕ್ಕಿಳಿಸಿ ರಕ್ಷಿಸುವ ಮೂಲಕ ಕೆಇಬಿಯವರಿಗೆ ಕರೆ ಮಾಡಿ ವಿದ್ಯುತ್ ಕಂಬದ ಪವರ್ ತೆಗೆಯುವಂತೆ ತಿಳಿಸಿದ್ದಾರೆ.
ಒಂದು ವೇಳೆ ಆ ವಿದ್ಯುತ್ ತಂತಿ ವಿದ್ಯಾರ್ಥಿಗಳ ಮೇಲೆ ಬಿದ್ದು, ವಿದ್ಯಾರ್ಥಿಗಳ ಜೀವಕ್ಕೆ ಅಪಾಯವಾಗಿದ್ದರೆ ಇದಕ್ಕೆಲ್ಲಾ ಯಾರು ಹೊಣೆಯಾಗುತ್ತಿದ್ದರು? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು,
- Advertisement -
ಟ್ರ್ಯಾಕ್ಟರ್ ನಲ್ಲಿದ್ದ ಮಕ್ಕಳು ಸ್ವಾಮಿ ವಿವೇಕಾನಂದ ಶಾಲೆ ವಿದ್ಯಾರ್ಥಿಗಳು ಎಂದು ಹೇಳಲಾಗುತ್ತಿದ್ದೂ, ಟ್ರ್ಯಾಕ್ಟರ್ ಚಾಲಕ ವಿದ್ಯುತ್ ಕಂಬದ ತಂತಿಗಳು ಮೇಲೆ ಇರುವುದನ್ನು ಗಮನಿಸದೆ ಚಾಲನೆ ಮಾಡಿರುವುದರಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

